ಜಿ20 ಶೃಂಗಸಭೆ: ‘ಔತಣಕೂಟದಲ್ಲಿ ಭಾಗವಹಿಸುವುದಿಲ್ಲ’ – ಹೆಚ್.ಡಿ.ದೇವೇಗೌಡ

ಬೆಂಗಳೂರು: ಜಿ20 ಶೃಂಗಸಭೆಯ ಪ್ರಯುಕ್ತ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿರುವ ಔತಣಕೂಟದಲ್ಲಿ ತಾನು ಭಾಗವಹಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ನಡೆಯಲಿರುವ ಔತಣಕೂಟಕ್ಕೆ ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡರಿಗೆ ಆಹ್ವಾನ ನೀಡಲಾಗಿತ್ತು. ಆದರೆ “ಆರೋಗ್ಯ ಕಾರಣದಿಂದಾಗಿ ಜಿ20 ಔತಣಕೂಟದಲ್ಲಿ ನಾನು ಭಾಗವಹಿಸುವುದಿಲ್ಲ. ಈ ಬಗ್ಗೆ ಈಗಾಗಲೇ ಸರಕಾರಕ್ಕೆ ತಿಳಿಸಿದ್ದೇನೆ.

ಈ ಕುರಿತು ಟ್ವೀಟ್‌ ಮಾಡಿದ ಅವರು, ಜಿ20 ಶೃಂಗಸಭೆಯು ಯಶಸ್ವಿಯಾಗಲಿ ಎಂದು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.

Comments (0)
Add Comment