ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ ಬಿಜೆಪಿ ಮುಖಂಡ ಸೇರಿದಂತೆ 8 ಮಂದಿ ಬಂಧನ.!

 

 

ಧಾರವಾಡ; ನವೆಂಬರ್ 13 ರಂದು ಮಧ್ಯರಾತ್ರಿ ಧಾರವಾಡ ಜಿಲ್ಲೆಯ ನರೇಂದ್ರ ಗ್ರಾಮದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಸೇರಿದಂತೆ ಎಂಟು ಜನರನ್ನು ಪೊಲೀಸರು ಬಂಧಿಸಿದ್ದಾರೆ.!

ಈ ವೇಳೆ ಜೂಜುಕೋರರು ಪೊಲೀಸರ ಮೇಲೆ ದಾಳಿ ನಡೆಸಿದ್ದು ಇಬ್ಬರಿಗೆ ಗಾಯಗಳಾಗಿವೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬಸನಗೌಡ ಅವರಿಗೆ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದ್ದರೆ, ಕಾನ್‌ಸ್ಟೆಬಲ್ ನಾಗರಾಜ್ ಅವರ ತಲೆಗೆ ಗಾಯವಾಗಿದೆ ಎಂದು ಧಾರವಾಡದ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ್ ಅವರ ಹೇಳಿದ್ದಾರೆ.

ಇಬ್ಬರನ್ನೂ ಧಾರವಾಡದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದುವರೆಗೆ ಎಂಟು ಜನರನ್ನು ಬಂಧಿಸಲಾಗಿದೆ ಮತ್ತು ಪೊಲೀಸರ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿರುವ ಇತರ 10 ಜನರನ್ನು ಹುಡುಕುತ್ತಿದ್ದೇವೆ ಎಂದು ಬೈಕೋಡ್ ತಿಳಿಸಿದ್ದಾರೆ.

ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ ಬಿಜೆಪಿ ಮುಖಂಡ ಸೇರಿದಂತೆ 8 ಮಂದಿ ಬಂಧನ.!
Comments (0)
Add Comment