‘ಜೆಡಿಯು ‘ಇಂಡಿಯಾ’ ಒಕ್ಕೂಟವನ್ನು ಬಿಡುವ ಬಗ್ಗೆ ಮಾಹಿತಿ ನೀಡಿಲ್ಲ’- ಖರ್ಗೆ

ಕಲಬುರಗಿ: ಜೆಡಿಯುನವರು ‘ಇಂಡಿಯಾ’ ಒಕ್ಕೂಟವನ್ನು ಬಿಡುವ ಬಗ್ಗೆ ನಮಗೆ ಯಾವ ಮಾಹಿತಿ ನೀಡಿಲ್ಲ ಎಂ ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ನ ಖರ್ಗೆಸ್ಪಷ್ಟಪಡಿಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿಯಬೇಕು ಎಂಬುದು ನಮ್ಮ ಅಪೇಕ್ಷೆ.
ಹೀಗಾಗಿ, ಎಲ್ಲ ಪಕ್ಷಗಳೂ ಒಗ್ಗಟ್ಟಾಗಿರಬೇಕು ಎಂದರು.

ಭಾನುವಾರ ಡೆಹ್ರಾಡೂನ್ ನಲ್ಲಿ ಪಕ್ಷದ ಸಭೆ ನಡೆಯಲಿದ್ದು, ಬಳಿಕ ದೆಹಲಿಗೆ ಹೋಗಿ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆಯುವೆ ಎಂದು ಹೇಳಿದರು.

Comments (0)
Add Comment