ಜೈಲಿನಲ್ಲಿರುವ ಪತಿಯ ಬೆಂಬಲಕ್ಕಾಗಿ ಕ್ರೇಜಿವಾಲ್‌ ಪತ್ನಿಯಿಂದ ವಾಟ್ಸ್‌ಪ್ ಅಭಿಯಾನ

ನವದೆಹಲಿ: ಮದ್ಯ ಹಗರಣ ಪ್ರಕರಣದಲ್ಲಿ ಬಂಧನ ವಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಸಂಕಷ್ಟಗಳು ಬಗೆಹರಿಯುವಂತೆ ಕಾಣುತ್ತಿಲ್ಲ.ನಿನ್ನೆ ಗುರುವಾರ ನ್ಯಾಯಾಲಯ ಅರವಿಂದ್ ಕೇಜ್ರಿವಾಲ್ ಅವರ ಇಡಿ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಣೆ ಮಾಡಿದೆ.

ಇದೀಗ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬೆಂಬಲಿಸುವಂತೆ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಅವರು ಇಂದು ವಾಟ್ಸಾಪ್ ಅಭಿಯಾನವೊಂದನ್ನು ಆರಂಭಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ಮಾತನಾಡಿದ ಸುನೀತಾ , ಬಂಧನದಲ್ಲಿರುವ ತನ್ನ ಪತಿಯ ಬೆಂಬಲಕ್ಕಾಗಿ ವಾಟ್ಸಾಪ್ ಮೂಲಕ ಕೇಜ್ರಿವಾಲ್ ಅವರನ್ನು ಆಶೀರ್ವದಿಸಿ ಎಂಬ ಅಭಿಯಾನವನ್ನು ಶುರು ಮಾಡಿದ್ದಾರೆ. ಈ ಅಭಿಯಾನ ಮೂಲಕ ಜೈಲಿನಲ್ಲಿರುವ ತನ್ನ ಪತಿಗೆ ಆಶೀರ್ವಾದ ಮತ್ತು ಶುಭಾಶಯಗಳನ್ನು ಕಳುಹಿಸುವಂತೆ ಮನವಿ ಮಾಡಿದ್ದಾರೆ.

ಹಾಗೇನೇ ವಾಟ್ಸಾಪ್ ಸಂಖ್ಯೆ 8297324624 ಈ ನಂಬರ್ ಗೆ ನೀವು ನಿಮ್ಮ ಸಂದೇಶವನ್ನು ಕಳುಹಿಸುವಂತೆ ಕೇಳಿಕೊಂಡಿದ್ದಾರೆ. ಅಲ್ಲದೇ ಕಳುಹಿಸುವ ಪ್ರತಿಯೊಂದು ಸಂದೇಶವನ್ನು ಕೇಜ್ರಿವಾಲ್ ಅವರಿಗೆ ತಲುಪಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಮಾ. 21 ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು.

Comments (0)
Add Comment