ಡಿಕೆಶಿ ವಿರುದ್ಧದ ಸಿಬಿಐ ಕೇಸ್ ವಾಪಸ್ ಪ್ರಸ್ತಾವನೆಗೆ ಅನುಮೋದನೆ ನೀಡಿದ ಸಚಿವ ಸಂಪುಟ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ​ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್​ಕೆ ಪಾಟೀಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇನ್ನು ಡಿಕೆ ಶಿವಕುಮಾರ್ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಜಿ ಆಗಿದ್ದ ಪ್ರಭುಲಿಂಗ ನಾವದಗಿ ವರದಿ ಆಧರಿಸಿ ಹಾಲಿ ಎಜಿಯಿಂದ ಅಭಿಪ್ರಾಯ ಪಡೆಯಲಾಗಿತ್ತು. ಸಿಬಿಐ ತನಿಖೆಗೆ ನೀಡುವಂತಹ ಪ್ರಕರಣ ಇದಲ್ಲವೆಂದು ಅಂದಿನ ಎಜಿ ವಿರೋಧಿಸಿದ್ದರು. ಅದನ್ನು ಕಡೆಗಣಿಸಿ ಅಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಅನುಮೋದನೆ ನೀಡಿತ್ತು.

Comments (0)
Add Comment