ತಿಹಾರ್ ಜೈಲಿನಲ್ಲಿರುವ ಕೇಜ್ರಿವಾಲ್ ಆರೋಗ್ಯದಲ್ಲಿ ಏರುಪೇರು

ದೆಹಲಿ: ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಸುಮಾರು 4.5 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ.

ಕೇಜ್ರಿವಾಲ್ ಅವರ ದೇಹದಲ್ಲಿನ ಸಕ್ಕರೆ ಮಟ್ಟ ಏರುಪೇರಾಗಿದೆ ಎನ್ನಲಾಗಿದೆ. ಕೇಜ್ರಿವಾಲ್ ಅವರ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಔಷಧಿ ನೀಡಲಾಗಿದೆ. ಮನೆಯ ಅಡುಗೆಯನ್ನು ಎರಡು ಹೊತ್ತಿನ ಊಟಕ್ಕೆ ನೀಡಲಾಗುತ್ತಿದೆ. ಕೇಜ್ರಿವಾಲ್ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ ಎಂದು ತಿಳಿದುಬಂದಿದೆ. ಆದರೆ ತಿಹಾರ್ ಜೈಲಿನ ಅಧಿಕಾರಿಗಳು ಕೇಜ್ರಿವಾಲ್ ಅವರು ಚೆನ್ನಾಗಿಯೇ ಇದ್ದಾರೆ ಎಂದು ತಿಳಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏ. 15ರ ವರೆಗೆ ನ್ಯಾಯಾಂಗ ಬಂಧನಕ್ಕೆ ಕೇಜ್ರಿವಾಲ್ ಅವರನ್ನು ಒಪ್ಪಿಸಲಾಗಿದೆ. ಇನ್ನು ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯು ಇಂದು ನಡೆಯಲಿದೆ.

Comments (0)
Add Comment