ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಮುಸ್ಲಿಮ್ ಕೋಟಾ ರದ್ದು

ಹೈದರಾಬಾದ್: ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಶನಿವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತಾತ್ಮಕ ಸುಧಾರಣೆ ತರಲು ಸಮಿತಿಯಿಂದನ್ನು ರಚಿಸಲಿದ್ದೇವೆ. ಹಾಗೂ ಮುಸ್ಲಿಮ್ ಕೋಟಾ ಮೀಸಲಾತಿಯನ್ನು ರದ್ದುಗೊಳಿಸಲಾಗುವುದು. ಹಾಗೂ ಮತ್ತು ಒಬಿಸಿಗಳು, ದಲಿತರು ಮತ್ತು ಎಸ್ಟಿಗಳ ಕೋಟಾವನ್ನು ಹೆಚ್ಚಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

Comments (0)
Add Comment