ತೇಜಸ್ವಿ ಸೂರ್ಯ, ಸೂಲಿಬೆಲೆ ಹತ್ಯೆಗೆ ಸಂಚು : 4 ವರ್ಷಗಳ ಬಳಿಕ ಮಾಸ್ಟರ್ ಮೈಂಡ್ ಅಜರ್‌ ಅರೆಸ್ಟ್..!

ಬೆಂಗಳೂರು : ಟೌನ್ ಬಳಿ ಸಿಎಎ ಪರ ಭಾಷಣ ಮಾಡಿದ್ದ ಮುಖಂಡರ ಹತ್ಯೆಗೆ ಸಂಚು ರೂಪಿಸಿದ ಮಾಸ್ಟರ್ ಮೈಂಡ್ ಅಜರ್‌ನನ್ನು 4 ವರ್ಷಗಳ ನಂತರ ಬಂಧಿಸಲಾಗಿದೆ. ಬೆಂಗಳೂರಿನ ಕಲಾಸಿಪಾಳ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಕಳೆದ ನಾಲ್ಕು ವರ್ಷಗಳಿಂದ ಆರೋಪಿ ಅಜರ್ ತಲೆಮರೆಸಿಕೊಂಡಿದ್ದ, 2019 ರಲ್ಲಿ ಸಿಎಎ ವಿಚಾರವಾಗಿ ಟೌನ್ ಹಾಲ್ ಬಳಿ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿಸೂರ್ಯ, ಚಕ್ರವರ್ತಿ ಸೂಲಿಬೆಲೆ ಸಿಎಎ ಪರ ಭಾಷಣ ಮಾಡಿದ್ದರು. ಈ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿ ತೆರಳುತ್ತಿದ್ದ ವರುಣ್ ಎಂಬಾತನ ಮೇಲೆ ಹಲ್ಲೆಯಾಗಿತ್ತು. ಮುಖಂಡರ ಹತ್ಯೆ ಮಿಸ್ಸಾಗಿ ವರುಣ್ ಮೇಲೆ ಹಲ್ಲೆಯಾಗಿತ್ತು.

ಘಟನೆಯ ನಂತರ 6 ಮಂದಿ ಆರೋಪಿಗಳನ್ನ ಬಂಧಿಸಲಾಗಿತ್ತು. ಘಟನೆ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ ನಾಲ್ಕು ವರ್ಷಗಳಿಂದ ಆ ಪ್ರಕರಣದ ಪ್ರಮುಖ ಆರೋಪಿ ಅಜರ್ ಎಸ್ಕೇಪ್ ಆಗಿದ್ದ. ಘಟನೆಯ ಬಳಿಕ ಸೌದಿಗೆ ಎಸ್ಕೇಪ್ ಆಗಿದ್ದ. ತನ್ನ ಪತ್ನಿಯ ಸಹೋದರರು ಸೌದಿಯಲ್ಲಿ ಇದ್ದ ಹಿನ್ನೆಲೆ ಅಲ್ಲಿಗೆ ಎಸ್ಕೇಪ್ ಆಗಿದ್ದ. ಐದು ತಿಂಗಳು ಸೌದಿಯಲ್ಲಿ ತಲೆಮರೆಸಿಕೊಂಡಿದ್ದ ಅಜರ್ ಬಳಿಕ ಅಲ್ಲಿಂದ ತನ್ನ ಪತ್ನಿಯ ಮನೆಗೆ ಬಂದಿದ್ದ. ಅಲ್ಲಿಂದ ಬಂದ ಬಳಿಕ ಕೋಲಾರದ ಬಂಗಾರಪೇಟೆಯಲ್ಲಿರುವ ಪತ್ನಿಯ ಮನೆಯಲ್ಲಿ ವಾಸವಿದ್ದ. ಕಳೆದ ನಾಲ್ಕು ವರ್ಷಗಳಿಂದ ಪತ್ನಿಯ ಮನೆಯಲ್ಲಿ ಇದ್ದುಕೊಂಡು ಕಾರು ಡಿಲಿಂಗ್ ಮಾಡಿಕೊಂಡಿದ್ದ. ಅಜರ್ ಗಾಗಿ NIA ಅಧಿಕಾರಿಗಳು ಕೂಡ ಸಾಕಷ್ಟು ಹುಡುಕಾಟ ನಡೆಸಿದ್ದರು. ಸದ್ಯ ಅಜರ್ ಬಗ್ಗೆ ಮಾಹಿತಿ ಕಲೆ ಹಾಕಿ ಬಂಗಾರ ಪೇಟೆ ಹೆಂಡತಿ ಮನೆಯಲ್ಲಿದ್ದಾಗ ಕಲಾಸಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

Comments (0)
Add Comment