ದೆಹಲಿ ಸಚಿವ ರಾಜ್ ಕುಮಾರ್ ಆನಂದ್ ನಿವಾಸದ ಮೇಲೆ ಇಡಿ ದಾಳಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕ್ಯಾಬಿನೆಟ್ ಸಚಿವ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ರಾಜ್ ಕುಮಾರ್ ಆನಂದ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿ ದಾಖಲೆಗಳ ಶೋಧ ನಡೆಸುತ್ತಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಜ್ ಕುಮಾರ್ ಭಾಗಿಯಾಗಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ದೆಹಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿನ ಸಚಿವರ ಮನೆಗಳು ಮತ್ತು ಇತರ ಕೆಲವು ಸ್ಥಳಗಳ ಮೇಲೆ ದಾಳಿ ನಡೆಸಿದೆ ಎನ್ನಲಾಗಿದೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ದೆಹಲಿಯ ಒಂಬತ್ತು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ.

Comments (0)
Add Comment