‘ನನ್ನನ್ನು ಜೈಲಿಗೆ ಕಳಿಸುವ ಹುನ್ನಾರ ನಡೆಯುತ್ತಿದೆ’- ಶಾಸಕ ಮುನಿರತ್ನ

ಬೆಂಗಳೂರು: ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ದುರುದ್ದೇಶಪೂರ್ವಕವಾಗಿ ತೆಜೋವಧೆ ಮಾಡಲು ತನ್ನ ಹೆಸರನ್ನು ಥಳುಕು ಹಾಕುವ ಪ್ರಯತ್ನ ನಡೆದಿದೆ ಎಂದು ಶಾಸಕ ಮುನಿರತ್ನ ನಾಯ್ಡು ಆರೋಪಿಸಿದ್ದಾರೆ.

ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಅವರು, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಾನು ಕ್ಷೇತ್ರದಲ್ಲಿರೋದು ಕೆಲವರಿಗೆ ಬೇಕಿಲ್ಲ. ಹೀಗಾಗಿ ಜೈಲಿಗೆ ಕಳಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಹೇಳಿದರು.

ಲೋಕಲ್ ಕಾರಾಗೃಹಗಳಿಗೆ ಅಟ್ಟುವ ಷಡಂತ್ರ ನಡೆಯುತ್ತಿದೆ ಎಂದು ದೂರಿದರು.ಈಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಯುತ್ತಿರುವುದರಿಂದ ಯಾವುದೇ ಹೇಳಿಕೆ  ಕೊಡುವುದು  ತಪ್ಪಾಗುತ್ತದೆ. ತನಿಖೆ ಪೂರ್ಣಗೊಂಡ ಬಳಿಕ ತನ್ನ ಹೆಸರಿಗೆ ಮಸಿ ಬಳಿಯಲು ಪ್ರಯತ್ನಿಸಿದ ಪ್ರತಿಯೊಬ್ಬನಿಗೆ ತಕ್ಕ ಉತ್ತರ ಕೊಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಆಸುಪಾಸಿನಲ್ಲಿ ಯಾವುದಾದರೂ ಅಪಘಾತ ನಡೆದರೂ ನಿಶ್ಚಿತವಾಗಿ ತನ್ನ ಮೇಲೆ ಆರೋಪ ಹೊರಿಸಲಾಗುತ್ತದೆ ಎಂದರು

Comments (0)
Add Comment