ನನ್ನ ಜೀವನವನ್ನು ದೇಶಕ್ಕೆ ಮುಡಿಪಾಗಿಟ್ಟಿದ್ದೇನೆ.! ಅರವಿಂದ ಕೇಜ್ರಿವಾಲ್.!

 

ನವದೆಹಲಿ: ನನ್ನ ಇಡೀ ಜೀವನವನ್ನು ದೇಶಕ್ಕೆ ಮುಡಿಪಾಗಿಟ್ಟಿದ್ದೇನೆ ಎಂದು ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.

ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರನ್ನು ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಗುರುವಾರ ರಾತ್ರಿ ಬಂಧಿಸಿದ್ದರು.

ನಾನು ಒಳಗೆ ಅಥವಾ ಹೊರಗಿರಬಹುದು. ನನ್ನ ಇಡೀ ಜೀವನ ದೇಶಕ್ಕೆ ಮುಡಿಪಾಗಿಟ್ಟಿದ್ದೇನೆ’ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇಂದು ಅವರನ್ನು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಕೇಜ್ರಿವಾಲ್ ನೀಡಿದ ಪ್ರತಿಕ್ರಿಯೆಯನ್ನು ಸುದ್ದಿಸಂಸ್ಥೆ ಎಎನ್ಐ  ತನ್ನ ಅಧಿಕೃತ ಎಕ್ಸ್  ಖಾತೆಯಲ್ಲಿ ಹಂಚಿಕೊಂಡಿದೆ.

ವಿಚಾರಣೆಗೆ ಕೇಜ್ರಿವಾಲ್ ಸ್ಪಂದಿಸುತ್ತಿಲ್ಲ. ಹೆಚ್ಚಿನ ವಿಚಾರಣೆ ನಡೆಸುವುದಕ್ಕಾಗಿ ಅವರನ್ನು ವಶಕ್ಕೆ ನೀಡುವಂತೆ ಕೋರಿ ಇ.ಡಿ, ನ್ಯಾಯಾಲಯದಲ್ಲಿ ಮನವಿ ಮಾಡಿದೆ.

ನನ್ನ ಜೀವನವನ್ನು ದೇಶಕ್ಕೆ ಮುಡಿಪಾಗಿಟ್ಟಿದ್ದೇನೆ.! ಅರವಿಂದ ಕೇಜ್ರಿವಾಲ್.!
Comments (0)
Add Comment