ನನ್ನ ಸ್ಪರ್ಧೆಗೆ ಹಸಿರು ನಿಶಾನೆ : ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ:ದೆಹಲಿಯಲ್ಲಿ ತಮಗೆ ಭೇಟಿ ನಿರಾಕರಿಸುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಆಗಿ ನನ್ನ ಸ್ಪರ್ಧೆಗೆ ಹಸಿರು ನಿಶಾನೆ ತೋರಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೆಹಲಿಗೆ ಕರೆದಾಗ ಅವರಿಗೆ ಗೌರವಕೊಟ್ಟು ಹೋಗಿದ್ದೆನು. ಆದರೆ ಅವರು ಭೇಟೆಯಾಗದೆ ನಾನು ಸ್ಪರ್ಧೆ ಮಾಡುವುದಕ್ಕೆ ಅಸ್ತು ಎಂಬ ಸಂದೇಶ ನೀಡಿದ್ದಾರೆ ಎಂದರು.

ಅಮಿತ್ ಶಾ ಮನೆಯಲ್ಲಿ ಬುಧವಾರ ರಾತ್ರಿ ಅವರ ಭೇಟಿಗೆ ಸೂಚಿಸಲಾಗಿತ್ತು. ಕೊನೆಯ ಗಳಿಗೆಯಲ್ಲಿ ಭೇಟಿಯ ಅವಶ್ಯಕತೆ ಇಲ್ಲ ಎಂದು ಅಮಿತ್ ಶಾ ಹೇಳಿರುವುದಾಗಿ ಅವರ ಕಚೇರಿಯ ಸಿಬ್ಬಂದಿ ತಿಳಿಸಿದರು. ಅದರ ಅರ್ಥ ನೀನು ಶಿವಮೊಗ್ಗಕ್ಕೆ ವಾಪಸ್ ಹೋಗು, ಅಲ್ಲಿ ಚುನಾವಣೆಗೆ ಸ್ಪರ್ಧಿಸಿ ಗೆದ್ದು ಬಾ ಎಂಬುದೇ ಆಗಿತ್ತು. ಸ್ವತಃ ಪಕ್ಷದ ವರಿಷ್ಠರೇ ಸಂದೇಶವನ್ನು ಕೊಟ್ಟಿದ್ದಾರೆ ಎಂದು ತಿಳಿಸಿದರು.

ನನ್ನ ಸ್ಪರ್ಧೆಗೆ ಹಸಿರು ನಿಶಾನೆ : ಕೆ.ಎಸ್.ಈಶ್ವರಪ್ಪ
Comments (0)
Add Comment