ನಲ್ಪಾಡ್‌ ವಿರುದ್ಧ ಪ್ರಕರಣ ದಾಖಲು!

 

ಬೆಂಗಳೂರು: ಅಸ್ಸಾಂನಲ್ಲಿ ಭಾರತ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯನ್ನು ಅಡ್ಡಿಪಡಿಸಿದ್ದನ್ನು ಖಂಡಿಸಿ, ಪ್ರತಿಭಟಿಸಿದ್ದ ಕಾಂಗ್ರೆಸ್ ಯುವ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್‌ ನಲ್ಪಾಡ್ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.

ಹ್ಯಾರಿಸ್ ನೇತೃತ್ವದಲ್ಲಿ ಮಂಗಳವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಲಾಗಿತ್ತು. ಅನುಮತಿ ಪಡೆಯದಿರುವುದರಿಂದ ಬೆಂಗಳೂರು ನಗರದ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಲಾಗಿದೆ. ಅನುಮತಿ ಪಡೆಯದೇ ಪ್ರತಿಭಟಿಸಿದ್ದಾರೆಂದು FIR ನಲ್ಲಿ ಉಲ್ಲೇಖಿಸಲಾಗಿದೆ.

ನಲ್ಪಾಡ್‌ ವಿರುದ್ಧ ಪ್ರಕರಣ ದಾಖಲು!
Comments (0)
Add Comment