ನಾಳೆ ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ಶಿವಮೊಗ್ಗ:ಲೋಕಸಭಾ ಚುನಾವಣೆಗೆ ಬಿಜೆಪಿಯು ತಮ್ಮ ಪುತ್ರನಿಗೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಬಂಡಾಯ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಈ ಚುನಾವಣೆಯಲ್ಲಿ ನೂರಕ್ಕೆ ನೂರು ಗೆಲ್ಲುತ್ತೇನೆ. ನಾಳೆ (ಶುಕ್ರವಾರ) 10 ಗಂಟೆಗೆ ನಾಮಪತ್ರ ಸಲ್ಲಿಕೆಗೆ ಮೆರವಣಿಗೆ ನಡೆಸುತ್ತೇನೆ. ಸಾಮಾನ್ಯ ಕಾರ್ಯಕರ್ತ, ಮತದಾರರೇ ನನಗೆ ಸ್ಟಾರ್ ಪ್ರಚಾರಕರು. ನಾನು ಬಿಜೆಪಿ ಶುದ್ದೀಕರಣ ಆಗಬೇಕು ಅಂತಾ ಹೊರಗೆ ಬಂದು ಹೋರಾಟ ಮಾಡ್ತಿದ್ದೇನೆ ಎಂದು ಹೇಳಿದರು

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನಸಭಾ ಪ್ರವಾಸ ಮುಗಿಸಿದ್ದೇನೆ. ಅತೀ ಹೆಚ್ಚು ಬಿಜೆಪಿ ಕಾರ್ಯಕರ್ತರು ಪಕ್ಷೇತರವಾಗಿ ಸ್ಪರ್ಧೆ ಮಾಡ್ತಿರುವ ಹಿಂದುತ್ವವಾದಿ ಈಶ್ವರಪ್ಪ ಅವರಿಗೆ ಬೆಂಬಲ ಕೊಡ್ತಿದ್ದಾರೆ ಎಂದರು.

ಕಾಂಗ್ರೆಸ್ ಕಾರ್ಯಕರ್ತರು ಅನೇಕರು ನೇರವಾಗಿ ಬೆಂಬಲ ಕೊಡ್ತಿದ್ದಾರೆ.ಕಾಂಗ್ರೆಸ್-ಜೆಡಿಎಸ್ ನವರು ಬೆಂಬಲ ಕೊಡ್ತಿದ್ದಾರೆ. ಕಾಂಗ್ರೆಸ್ ಕ್ಯಾಂಡಿಡೇಟು ವೀಕ್ ಅದಕ್ಕೆ ನಿಮಗೆ ಬೆಂಬಲ ಕೊಡ್ತೀವಿ ಅಂತಿದ್ದಾರೆ. ನಾಳೆ ಎಲ್ಲರೂ ನಾಮಪತ್ರ ಸಲ್ಲಿಸಲು ಬರುತ್ತಿದ್ದಾರೆ. ಇಷ್ಟರಮಟ್ಟಿಗೆ ಬೆಂಬಲ ಸಿಗುತ್ತದೆ ಅಂತಾ ನಾನು ನಿರೀಕ್ಷೆ ಮಾಡಿರಲಿಲ್ಲ ಎಂದು ಈಶ್ವರಪ್ಪ ಹೇಳಿದರು.

Comments (0)
Add Comment