ನೂತನ ರಾಜ್ಯಾಧ್ಯಕ್ಷರ ನೇಮಕ ಬಳಿಕ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿದೆ : ಬಿಎಸ್ ವೈ

ಶಿವಮೊಗ್ಗ: ರಾಜ್ಯ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕವಾದ ಬಳಿಕ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿದ್ದು, ಮತ್ತಷ್ಟು ಹುಮ್ಮಸ್ಸಿನಿಂದ ಕಾರ್ಯನಿರ್ವಹಿಸಲು ಸಜ್ಜಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ರಾಜ್ಯ ಬಿಜೆಪಿಯ ಹೊಸ ಸಾರಥಿ ಬಿ.ವೈ.ವಿಜಯೇಂದ್ರರವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಕಾರ್ಯಕರ್ತರಲ್ಲಿ ದಿನದಿಂದ ದಿನಕ್ಕೆ ಉತ್ಸಾಹ ಹೆಚ್ಚಾಗುತ್ತಿದೆ. ಅಲ್ಲದೆ ಇತ್ತೀಚಿನ ದಿನಗಳಲ್ಲಿ ಬಹುತೇಕ ಜನರು ರಾಜ್ಯ ಸರ್ಕಾರದ ಬಗ್ಗೆ ಅಸಡ್ಡೆ ತೋರಿಸುತ್ತಿದ್ದಾರೆ. ಸರ್ಕಾರದ ವಿರುದ್ದ ಬೇಸರ ಕೂಡ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.

ಇನ್ನು ನಮ್ಮ ಪಕ್ಷದಲ್ಲಿ ನೂತನ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕರು ಆಯ್ಕೆಯಾದ ಬಳಿಕ ನಮ್ಮ ಪಕ್ಷದಲ್ಲಿ ಹೊಸ ಚೈತನ್ಯ ಮೂಡಿದ್ದು, ಈಗ ಚುನಾವಣೆ ನಡೆದರು ರಾಜ್ಯದಲ್ಲಿ ಬಹುಮತ ಬರುವುದಂತೂ ಸ್ಪಷ್ಟ. ಇನ್ನು ಲೋಕಸಭೆಯಲ್ಲಿ 28 ಕ್ಕೆ 28 ಸ್ಥಾನಗಳನ್ನು ಗೆಲ್ಲುವ ಮೂಲಕ ನಮ್ಮ ಪಕ್ಷದ ಒಗ್ಗಟ್ಟನ್ನು ತೋರಿಸುವುದೊಂದೇ ಬಾಕಿಯಿದೆ ಎಂದಿದ್ದಾರೆ.

Comments (0)
Add Comment