ಪಂಜಾಬ್​ಗಾಗಿ ಹಮಾಸ್ ಮಾದರಿಯಲ್ಲೇ ದಾಳಿ ಮಾಡುತ್ತೇವೆ – ಉಗ್ರ ಪನ್ನು ಭಾರತಕ್ಕೆ ಬೆದರಿಕೆ

ಖಲಿಸ್ತಾನ್: ಪಂಜಾಬ್​ಗಾಗಿ ಹಮಾಸ್ ಮಾದರಿಯಲ್ಲೇ ದಾಳಿ ನಡೆಸುತ್ತೇವೆ ಎಂದು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಭಾರತಕ್ಕೆ ಬೆದರಿಕೆ ಹಾಕಿರುವುದಾಗಿ ವರದಿಯಾಗಿದೆ.

ಗುರುಪತ್ವಂತ್ ಸಿಂಗ್ ಪನ್ನು ಪ್ರಧಾನಿ ನರೇಂದ್ರ ಮೋದಿಗೆ ಎಚ್ಚರಿಕೆ ನೀಡಿದ್ದು, ಇಸ್ರೇಲ್​-ಪ್ಯಾಲೆಸ್ತೀನ್ ಸಂಘರ್ಷದಿಂದಾರೂ ಬುದ್ಧಿ ಕಲಿತುಕೊಳ್ಳಿ, ಹಮಾಸ್ ಮಾದರಿಯಲ್ಲೇ ನಾವು ದಾಳಿ ನಡೆಸುತ್ತೇವೆ ಎಂದಿದ್ದಾನೆ.

ಇನ್ನು ಖಲಿಸ್ತಾನಿ ಉಗ್ರ ಪನ್ನು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಶೇರ್ ಮಾಡುವ ಮೂಲಕ ಬೆದರಿಕೆ ಹಾಕಿದ್ದಾನೆ. ನಾವು ಪಂಜಾಬ್​ನ್ನು ಭಾರತದ ಭಾಗವೆಂದು ಪರಿಗಣಿಸುವುದಿಲ್ಲ ಅದನ್ನು ಭಾರತದಿಂದ ಮುಕ್ತಗೊಳಿಸಲು ಯಾವ ಹಂತಕ್ಕೆ ಬೇಕಾದರೂ ಇಳಿಯುತ್ತೇವೆ ಎಂದು ಹೇಳಿದ್ದಾನೆ.

 

Comments (0)
Add Comment