ಪಿಓಕೆ ಸಮಸ್ಯೆ ಕುರಿತ ಅಮಿತ್ ಶಾ ಹೇಳಿಕೆಗೆ ರಾಹುಲ್ ಗಾಂಧಿ ತೀವ್ರ ಆಕ್ಷೇಪ

ನವದೆಹಲಿ: ನೆಹರೂ ಅವರ ಪ್ರಮಾದವೇ ಕಾಶ್ಮೀರ-ಪಿಓಕೆ ಸಮಸ್ಯೆಯ ಮೂಲ ಬೇರು ಎಂದು ಲೋಕಸಭೆ ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಆಕ್ರೋಶ ಹೊರಹಾಕಿದ್ದರು. ಇದೀಗ ಅಮಿತ್ ಶಾ ಹೇಳಿಕೆಗೆ ರಾಹುಲ್ ಗಾಂಧಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಚಿವರ ಹೇಳಿಕೆಗೆ ಸಂಸತ್ ಭವನದ ಬಳಿ ಪ್ರತಿಕ್ರಿಸಿದ ರಾಹುಲ್ ಗಾಂಧಿ, ಪಂಡಿತ್ ನೆಹರೂ ಅವರು ಭಾರತಕ್ಕಾಗಿ ತಮ್ಮ ಪ್ರಾಣವನ್ನೆ ಅರ್ಪಿಸಿದ್ದಾರೆ. ಹಲವಾರು ವರ್ಷಗಳು ಸೆರೆವಾಸದಲ್ಲಿದ್ದರು. ಅಮಿತ್ ಶಾ ಅವರಿಗೆ ಇತಿಹಾಸದ ಅರಿವೇ ಇಲ್ಲ. ಅವರು ಇತಿಹಾಸ ತಿಳಿದುಕೊಳ್ತಾರೆಂದು ನಾನು ನಿರೀಕ್ಷೆ ಮಾಡುವುದಿಲ್ಲ. ಯಾಕೆಂದರೆ ಸಚಿವರಿಗೆ ಇತಿಹಾಸವನ್ನು ತಿರುಚೋದೇ ಕೆಲಸ ಎಂದು ಗುಡುಗಿದ್ದಾರೆ.

ಇನ್ನು ಸಚಿವ ಅಮಿತ್ ಶಾ ಹೇಳಿಕೆಗೆ ರಾಹುಲ್ ಗಾಂಧಿ ಅಷ್ಟೇ ಅಲ್ಲದೇ, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹಾಗೂ ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Comments (0)
Add Comment