ಪುಲ್ವಾಮಾದಲ್ಲಿ ವಲಸೆ ಕಾರ್ಮಿಕನ ಗುಂಡಿಕ್ಕಿ ಹತ್ಯೆಗೈದ ಭಯೋತ್ಪಾದಕರು

ಶ್ರೀನಗರ: ಉತ್ತರ ಪ್ರದೇಶದ ವಲಸೆ ಕಾರ್ಮಿಕನನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವಲಸೆ ಕಾರ್ಮಿಕನನ್ನು ಮುಕೇಶ್ ಎಂದು ಗುರುತಿಸಲಾಗಿದೆ.

ಗುಂಡಿನ ದಾಳಿ ನಡೆಸಿದ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದು ಭಯೋತ್ಪಾದಕರ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.ಕಳೆದ 24 ಗಂಟೆಗಳಲ್ಲಿ ಪುಲ್ವಾಮಾದಲ್ಲಿ ನಡೆದ ಎರಡನೇ ಉಗ್ರರ ದಾಳಿ ಇದಾಗಿದೆ.

Comments (0)
Add Comment