ಪೊಲೀಸ್ ನೌಕರ ದಂಪತಿಗಳಿಗೆ ಇಲ್ಲಿದೆ ಶುಭ ಸುದ್ದಿ.!

 

ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸತಿ-ಪತಿ ತಮ್ಮನ್ನು ಒಂದೇ ಜಿಲ್ಲೆಗೆ ವರ್ಗಾವಣೆ ಮಾಡುವಂತೆ ಹಲವು ವರ್ಷಗಳಿಂದ ಆಗ್ರಹಿಸುತ್ತಾ ಬಂದಿದ್ದರು.

ಇದಕ್ಕೆ ಸೂಕ್ತವಾಗಿ ಸ್ಪಂದಿಸಿದ್ದ ಸರ್ಕಾರ, ಇತ್ತೀಚೆಗಷ್ಟೇ ವಿಧಾನಸಭೆಯಲ್ಲಿ ವಿಧೇಯಕವನ್ನೂ ಅಂಗೀಕರಿಸಿತ್ತು.

ಈ ಬೆನ್ನಲ್ಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ಅವರಿಗೆ ಅರ್ಹ ದಂಪತಿಯನ್ನು ಇಚ್ಛಿಸಿದ ಜಿಲ್ಲೆಗೆ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಿ ಎಂದು ಸೂಚಿಸುವ ಮುಖೇನ ಅಸ್ತು ಎಂದಿದ್ದಾರೆ.

ಪೊಲೀಸ್ ನೌಕರ ದಂಪತಿಗಳಿಗೆ ಇಲ್ಲಿದೆ ಶುಭ ಸುದ್ದಿ.!
Comments (0)
Add Comment