ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ..!

ಹಾಸನ : ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ ತಾಲ್ಲೂಕಿನ, ಕುಂತಿಗುಡ್ಡದಲ್ಲಿ ನಡೆದಿದೆ. ಆಲೂರು ತಾಲ್ಲೂಕಿನ ಕವಳಗೆರೆ ಗ್ರಾಮದ 20 ವರ್ಷದ ಸುಚಿತ್ರಾ ಮೃತ ದುರ್ದೈವಿಯಾಗಿದ್ದು 23 ವರ್ಷದ ತೇಜಸ್ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ಮೊಸಳೆಹೊಸಳ್ಳಿ ಇಂಜಿನಿಯರ್ ಕಾಲೇಜಿನಲ್ಲಿ ಬಿಇ‌ ಮ್ಯಾಕಾನಿಕಲ್ ಓದುತ್ತಿದ್ದ ಸುಚಿತ್ರಾಳ‌ ಕತ್ತು ಕುಯ್ದು ಬರ್ಬರವಾಗಿ ಹತ್ಯೆ ಮಾಡಿ ಆರೋಪಿ ತೇಜಸ್ ಎಸ್ಕೇಪ್ ಆಗಿದ್ದು ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರವಾದ ಕಾರಣ ಏನೆಂಬುದು ಇನ್ನು ತಿಳಿದು ಬಂದಿಲ್ಲ, ಆರೋಪಿ ಬಂಧನದ ಬಳಿಕ ಕಾರಣ ತಿಳಿಯಲಿದೆ.

Comments (0)
Add Comment