ಬಂಜಾರ ಮಹಿಳೆಯರಿಗೆ ಸಾಂಪ್ರದಾಯಿಕ ಕಸೂತಿ, ಪೂರಕ ಹೊಲಿಗೆ ತರಬೇತಿ: ಅರ್ಜಿ ಆಹ್ವಾನ

 

ಚಿತ್ರದುರ್ಗ: ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ನಿಯಮಿತ ದಾವಣಗೆರೆ ವಲಯ (ದಾವಣಗೆರೆ, ಹಾವೇರಿ ಹಾಗೂ ಚಿತ್ರದುರ್ಗ ಜಿಲ್ಲೆ) ಕಚೇರಿ ವತಿಯಿಂದ ಬಂಜಾರ ಸಾಂಪ್ರದಾಯಕ ಕಸೂತಿ ಮತ್ತು ಪೂರಕ ಹೊಲಿಗೆ ತರಬೇತಿಯನ್ನು ಕೈಗೊಳ್ಳಲು ನುರಿತ, ಅರ್ಹ ನೋಂದಾಯಿತ ಸಂಘ, ಸಂಸ್ಥೆಗಳ ಮೂಲಕ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿರುತ್ತದೆ. ತರಬೇತಿ ನೀಡಬೇಕಾದ ಅರ್ಹ ತರಬೇತಿ ಸಂಸ್ಥೆಗಳಿಂದ ನಿಗಧಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತವುಳ್ಳ ಅರ್ಹ ನೋಂದಾಯಿತ ಸಂಘ, ಸಂಸ್ತೆಗಳು ದಾವಣಗೆರೆ ವಲಯ ಕಚೇರಿಗೆ ಭೇಟಿ ನೀಡಿ ನಿಗಮ ನಿಗಧಿಪಡಿಸಿರುವ ನಿಯಮಾನುಸಾರ ನಿಗಧಿತ ನಮೂನೆಯಲ್ಲಿ ಅರ್ಜಿಯನ್ನು ನವೆಂಬರ್ 4ರ ಒಳಗಾಗಿ ವಲಯ ಕಚೇರಿಗೆ ಸಲ್ಲಿಸಲು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ದಾವಣಗೆರೆ ವಲಯ ಕಚೇರಿ ದೂರವಾಣಿ ಸಂಖ್ಯೆ 08192-233678  ಗೆ ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆ ವಲಯ ಕಚೇರಿ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

ಪೂರಕ ಹೊಲಿಗೆ ತರಬೇತಿ: ಅರ್ಜಿ ಆಹ್ವಾನಬಂಜಾರ ಮಹಿಳೆಯರಿಗೆ ಸಾಂಪ್ರದಾಯಿಕ ಕಸೂತಿ
Comments (0)
Add Comment