ಬಾಲಕಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮತ್ತೆ ಆತ್ಮಹತ್ಯೆಗೆ ಯತ್ನ

ಕೋಲಾರ: ಅಪ್ರಾಪ್ತ ಬಾಲಕಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆಯುತ್ತಾ ಚೇತರಿಸಿಕೊಳ್ಳುತ್ತಿದ್ದ ಯುವಕನೊಬ್ಬ ಆಸ್ಪತ್ರೆಯಲ್ಲಿ ಮತ್ತೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಫೆ. 7 ರಂದು 9 ನೇ ತರಗತಿಯ ಅಪ್ರಾಪ್ತ ಬಾಲಕಿಯನ್ನ ಹೊಸಕೋಟೆ ತಾಲೂಕಿನ ಬಾಣರಹಳ್ಳಿ ಬಳಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿ ಬಳಿಕ ತಾನೂ ಕತ್ತುಕೊಯ್ದುಕೊಂಡು ಆತ್ಮಹತ್ಯೆ ಯತ್ನಿಸಿದ್ದ ಆದರೆ ಗುತ್ತಿಗೆಗೆ ಸರ್ಜರಿ ಮಾಡಿ ಇನ್ನೇನು ಚೇತರಿಸಿಕೊಳ್ಳುತ್ತಿದ್ದ ನಿತಿನ್ ಫೆ 11 ರಂದು ಆಸ್ಪತ್ರೆಯ ಎರಡನೇ ಮಹಡಿಯಿಂದ ಹಾರಿ ಮತ್ತೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂಕು ದೊಮ್ಮಲೂರು ಗ್ರಾಮದ ನಿವಾಸಿ ನಿತಿನ್ ಆಗಿದ್ದು ತಾನು ಪ್ರೀತಿಸುತ್ತಿದ್ದ ನಂದಿತಾಳನ್ನು ಕೊಂದು ತಾನು ಆತ್ಮಹತ್ಯೆಗೆ ಯತ್ನಿಸಿರುವ ಯುವಕ ಪ್ರಿಯತಮೆಯನ್ನ ಕೊಂದು ಮಾನಸಿಕವಾಗಿ ಕುಗ್ಗಿದ್ದು, ಹೀಗೆ ಮನಬಂದಂತೆ ವರ್ತಿಸುತ್ತಿದ್ದ ನಿತಿನ್ ಮತ್ತೆ ಆತ್ಮಹತ್ಯೆ ನಿರ್ಧಾರ ಮಾಡಿದ್ದಾನೆ.

ಆಸ್ಪತ್ರೆಯ ಕಾರಿಡಾರ್ ನಲ್ಲಿ ವಾಕಿಂಗ್ ಮಾಡಲು ಬಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ, ಇನ್ನೂ ತೀವ್ರವಾಗಿ ಗಾಯಗೊಂಡ ಯುವಕ ನಿತಿನ್ ನನ್ನು ಐಸಿಯು ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಕೋಲಾರ ಗಲ್‍ಪೇಟೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

Comments (0)
Add Comment