‘ಬಿಎಸ್‌ವೈ ಕಡೆಗಣಿಸಿದ್ದೇ ಬಿಜೆಪಿಯ ಸೋಲಿಗೆ ಕಾರಣ’-ರೇಣುಕಾಚಾರ್ಯ

ದಾವಣಗೆರೆ: ಬಿಎಸ್‌ವೈ ಕಡೆಗಣಿಸಿದ್ದೇ ಬಿಜೆಪಿಯ ಸೋಲಿಗೆ ಕಾರಣ. ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತಂದಿದ್ದೇ ಯಡಿಯೂರಪ್ಪ. ಆದರೆ ಈಗ ಅವರನ್ನೇ ಅಧಿಕಾರದಿಂದ ಕೆಳಗಿಳಿಸಿದ್ದು ಅದರ ಪರಿಣಾಮ ಅನುಭವಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಪರೋಕ್ಷವಾಗಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಈಗ ಬಿಜೆಪಿ ಕಚೇರಿಯಲ್ಲಿ ಕುಳಿತವರಿಂದ ಒಂದು ಗ್ರಾಮ ಪಂಚಾಯಿತಿ ಚುನಾವಣೆ ಸಹ ಗೆಲ್ಲಲು ಆಗದು. ಪಕ್ಷಕ್ಕೆ ಸಾಕಷ್ಟು ಡ್ಯಾಮೇಜ್ ಆದ ಬಳಿಕ ಈಗ ಎಲ್ಲರೂ ಯಡಿಯೂರಪ್ಪ ನಾಯಕತ್ವ ಎನ್ನುತ್ತಿದ್ದಾರೆ. ಬಿಎಸ್‌ವೈ ಕಡೆಗಣಿಸಿದ್ದೇ ಪಕ್ಷದ ಸೋಲಿಗೆ ಕಾರಣ. ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತಂದಿದ್ದೇ ಯಡಿಯೂರಪ್ಪ. ಆದರೆ, ಅವರನ್ನೇ ಅಧಿಕಾರದಿಂದ ಕೆಳಗಿಳಿಸಿದ್ದು ಅದರ ಪರಿಣಾಮ ಅನುಭವಿಸುತ್ತಿದ್ದಾರೆ ಎಂದರು.

ಇನ್ನು ದೇಶಕ್ಕೆ ಮೋದಿ ಹೇಗೋ ಹಾಗೇ ರಾಜ್ಯಕ್ಕೆ ಯಡಿಯೂರಪ್ಪ. ಎಲ್ಲ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋದ ಮಹಾನ್ ನಾಯಕ. ವ್ಯವಸ್ಥಿತವಾಗಿ ಯಡಿಯೂರಪ್ಪ ನವರನ್ನು ಇಳಿಸುವ ಕೆಲಸ ಮಾಡಿದ್ದರು. ನಮ್ಮವರೇ ಆರೋಪ ಹೊರೆಸಿ ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರು ಎಂದು ಸ್ವಪಕ್ಷದವರ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Comments (0)
Add Comment