‘ಬಿಜೆಪಿಯಲ್ಲಿ ಕೆಲವರಿಗೆ ದುರಹಂಕಾರ ಬಂದಿದೆ’ – ಸ್ವಪಕ್ಷದ ವಿರುದ್ದ ರೇಣುಕಾಚಾರ್ಯ ಗರಂ

ಬೆಂಗಳೂರು: ಕರ್ನಾಟಕದ ಬಿಜೆಪಿಯಲ್ಲಿ ಕೆಲವರಿಗೆ ದುರಹಂಕಾರ ಬಂದಿದೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಸ್ವಪಕ್ಷದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಸೋತ ನಂತರ ಎಲ್ಲರನ್ನೂ ಕರೆದು ಮಾತಾಡಿಸಬೇಕು. ಯಡಿಯೂರಪ್ಪ ಹಿಂದೆಲ್ಲ ಆ ಕೆಲಸ ಮಾಡಿದ್ರು. ಆದರೆ ಬಿಜೆಪಿಯಲ್ಲಿ ಕೆಲವರ ದುರಹಂಕಾರದಿಂದ ಬಹಳ ಜನ ಬೇಸತ್ತು ಹೋಗಿದ್ದಾರೆ ಎಂದರು.

ಇನ್ನು ಬೇಸತ್ತು ಹೋಗಿರುವವರು ಮುಂದೆ ಪಕ್ಷ ಬಿಡಬಹುದು. ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗಿದೆ ಅಂತ ಜನ ಮಾತಾಡ್ತಿದ್ದಾರೆ. ನಾನು ಹೇಳ್ತಿಲ್ಲ, ಜನ ಹಾಗೆ ಹೇಳ್ತಿದ್ದಾರೆ ಎಂದಿದ್ದಾರೆ.

Comments (0)
Add Comment