ಬಿಜೆಪಿಯವರು ತಿಪ್ಪರಲಾಗ ಹಾಕಿದರೂ ಏನು ಆಗಲ್ಲ – ಸಚಿವ ಈಶ್ವರ ಬಿ. ಖಂಡ್ರೆ

ಬೀದರ್: ಬಿಜೆಪಿಯವರು ತಿಪ್ಪರಲಾಗ ಹಾಕಿದರೂ ಏನು ಆಗಲ್ಲ. ಹಿಂದೆ ಆಪರೇಷನ್‌ ಕಮಲ ಮಾಡಿದ್ದಕ್ಕೆ ಏನಾಗಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ. ಬೀದರ್‌ ನಗರದ ಬ್ರಿಮ್ಸ್‌ನಲ್ಲಿ ಶನಿವಾರ ಸಂಜೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಾರು ಕೂಡ ಕಾಂಗ್ರೆಸ್‌ ಪಕ್ಷ ಬಿಟ್ಟು ಬಿಜೆಪಿಗೆ ಹೋಗುವುದಿಲ್ಲ. ಸ್ಥಿರವಾದ ಸರ್ಕಾರ ಇದೆ. ಎಲ್ಲಾ ಭರವಸೆಗಳನ್ನು ಈಡೇರಿಸಲಾಗುತ್ತಿದೆ. ಬಿಜೆಪಿಯವರು ತಿಪ್ಪರಲಾಗ ಹಾಕಿದರೂ ಏನು ಆಗಲ್ಲ. ಅವರ ಸಮಸ್ಯೆ ಅವರು ಬಗೆಹರಿಸಿಕೊಳ್ಳಬೇಕು ಎಂದರು. ಜಾತಿ, ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸವನ್ನು ಬಿಜೆಪಿಯವರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಈ ನೆಲದ ಕಾನೂನು ಎಲ್ಲರಿಗೂ ಒಂದೇ ಇದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಕುರಿತು ಹೆಚ್ಚಿನ ಅರಿವು ಮೂಡಿಸಲಾಗುವುದು. ಕಾನೂನು ತಜ್ಞರ ಜೊತೆ ಚರ್ಚಿಸಿ ಶಾಶ್ವತವಾದ ನಿಯಮಗಳನ್ನು ರೂಪಿಸಲಾಗುವುದು ಎಂದು ಹೇಳಿದರು.

Comments (0)
Add Comment