‘ಬಿಜೆಪಿಯೂ,ಎಎಪಿ ಶಾಸಕರನ್ನು ಸೆಳೆಯಲು ಷಡ್ಯಂತ್ರ ರೂಪಿಸುತ್ತಿದೆ’: ಕೇಜ್ರಿವಾಲ್ ಗಂಭೀರ ಆರೋಪ

ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷವು ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರನ್ನು ಬೇಟೆಯಾಡಿ ತಮ್ಮ ಪಕ್ಷವನ್ನು ಒಡೆಯಲು ಪ್ರಯತ್ನಿಸುತ್ತಿದೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಆರೋಪಿಸಿದ್ದಾರೆ.

ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಬೆದರಿಕೆ ಹಾಕಿರುವ ಬಿಜೆಪಿ ಇದನ್ನು ಮುಂದಿಟ್ಟುಕೊಂಡು ಎಎಪಿ ಶಾಸಕರೊಂದಿಗೆ ಮಾತುಕತೆ ನಡೆಸಿದೆ ಎಂದು ಅವರು ಆರೋಪಿಸಿದ್ದಾರೆ.

ಎಕ್ಸ್‌ನಲ್ಲಿನ ತಮ್ಮ ಸುದೀರ್ಘ ಪೋಸ್ಟ್‌ನಲ್ಲಿ, “ಅವರು ನಮ್ಮ21 ಶಾಸಕರನ್ನು ಸಂಪರ್ಕಿಸಿದ್ದಾರೆ ಎಂದು ಹೇಳಿಕೊಂಡರೂ ನಮ್ಮ ಮಾಹಿತಿಯ ಪ್ರಕಾರ ಅವರು ಇಲ್ಲಿಯವರೆಗೆ ಕೇವಲ 7 ಶಾಸಕರನ್ನು ಸಂಪರ್ಕಿಸಿದ್ದಾರೆ ಮತ್ತು ಅವರೆಲ್ಲರೂ ನಿರಾಕರಿಸಿದ್ದಾರೆ. ಇದರರ್ಥ ಮದ್ಯದ ಹಗರಣದ ತನಿಖೆಗಾಗಿ ನನ್ನನ್ನು ಬಂಧಿಸಲಾಗುತ್ತಿಲ್ಲ. ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಉರುಳಿಸಲು ಪಿತೂರಿ ಮಾಡುತ್ತಿದ್ದಾರೆ. ಕಳೆದ ಒಂಬತ್ತು ವರ್ಷಗಳಲ್ಲಿ ಅವರು ನಮ್ಮ ಸರ್ಕಾರವನ್ನು ಉರುಳಿಸಲು ಅನೇಕ ಷಡ್ಯಂತ್ರಗಳನ್ನು ರೂಪಿಸಿದರು. ಆದರೆ ಅವರಿಗೆ ಯಾವುದೇ ಯಶಸ್ಸು ಸಿಗಲಿಲ್ಲ.ದೆಹಲಿಯ ಜನರು “ಎಎಪಿ” ಅನ್ನು ಅಪಾರವಾಗಿ ಪ್ರೀತಿಸುತ್ತಾರೆ. ಆದ್ದರಿಂದ, ಚುನಾವಣೆಯಲ್ಲಿ ಎಎಪಿಯನ್ನು ಸೋಲಿಸುವುದು ಅವರ ಶಕ್ತಿಯಲ್ಲಿಲ್ಲ. ಹಾಗಾಗಿ ನಕಲಿ ಮದ್ಯದ ಹಗರಣದ ನೆಪದಲ್ಲಿ ಅವರನ್ನು ಬಂಧಿಸಿ ಸರ್ಕಾರವನ್ನು ಬೀಳಿಸಲು ಮುಂದಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

 

Comments (0)
Add Comment