ಬಿಜೆಪಿ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ.!

 

 

ಬೆಂಗಳೂರು: ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ರಾಜ್ಯದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪ್ರಕಟಿಸಿದೆ.

ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ಚಿಕ್ಕಬಳ್ಳಾಪುರದಿಂದ ಕೆ. ಸುಧಾಕರ್, ಉತ್ತರಕನ್ನಡದಿಂದ ವಿಶ್ವೇಶ್ವರ ಹೆಗಡೆ ಹಾಗೂ ರಾಯಚೂರಿನಿಂದ ರಾಜಾ ಅಮರೇಶ್ವರ ನಾಯಕ ಅವರಿಗೆ ಟಿಕೆಟ್ ನೀಡಲಾಗಿದೆ.

ಉತ್ತರಕನ್ನಡದಿಂದ ಅನಂತಕುಮಾರ ಹೆಗಡೆ ಅವರಿಗೆ ಬಿಜೆಪಿ ಈ ಸಲ ಟಿಕೆಟ್ ನೀಡಿಲ್ಲ. ಕಗ್ಗಂಟಾಗಿರುವ ಚಿತ್ರದುರ್ಗ ಕ್ಷೇತ್ರಕ್ಕೆ ಅಭ್ಯರ್ಥಿಯ ಹೆಸರು ಇನ್ನೂ ಅಂತಿಮಗೊಂಡಿಲ್ಲ.

ಬಿಜೆಪಿ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ.!
Comments (0)
Add Comment