ಬಿಜೆಪಿ ಶಾಸಕ ಕೆ ಗೋಪಾಲಯ್ಯಗೆ ಜೀವ ಬೆದರಿಕೆ, ದೂರು ದಾಖಲು

ಬೆಂಗಳೂರು: ಬಿಜೆಪಿ ಶಾಸಕ ಕೆ ಗೋಪಾಲಯ್ಯ ಅವರಿಗೆ ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಮಾಜಿ ಕಾರ್ಪೊರೇಟರ್ ಪದ್ಮರಾಜು ವಿರುದ್ಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ನಿನ್ನೆ (ಮಂಗಳವಾರ) ರಾತ್ರಿ 11ರ ಸುಮಾರಿಗೆ ಗೋಪಾಲಯ್ಯ ಅವರಿಗೆ ಕರೆ ಮಾಡಿದ್ದ ಪದ್ಮರಾಜ್, ಹಣಕ್ಕೆ ಬೇಡಿಕೆ ಇಟ್ಟು ಅವಾಚ್ಯವಾಗಿ ನಿಂದಿಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಬಿಜೆಪಿ ಶಾಸಕ ಗೋಪಾಲಯ್ಯ ಅವರು ಕಾಮಾಕ್ಷಿಪಾಳ್ಯ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಶಾಸಕ ಗೋಪಾಲಯ್ಯ ಅವರು, ಇಂದು ಬೆಳಗ್ಗೆ ಸದನಕ್ಕೆ ತೆರಳಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಸ್ಪೀಕರ್‌ ಯುಟಿ ಖಾದರ್ ಅವರಿಗೆ ದೂರು ನೋಡುತ್ತೇನೆ. ಪದ್ಮರಾಜು​​ ಬೆದರಿಕೆ ಹಾಕಿದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ ಅವರಿಗೂ ದೂರು ನೀಡುತ್ತೇನೆ. ಪದ್ಮರಾಜುನನ್ನ ಗಡಿಪಾರು ಮಾಡುವಂತೆ ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

Comments (0)
Add Comment