ಬೆಂಗಳೂರಿಗೆ ಇನ್ನು ಒಂದು ತಿಂಗಳು ಮಾತ್ರ ನೀರು ಪೂರೈಕೆ.!

 

ಬೆಂಗಳೂರು: ರಾಜ್ಯದಲ್ಲಿ ಬರದ  ಛಾಯೆ ಹೆಚ್ಚಾಗುತ್ತಿದ್ದು ಅನೇಕ ಜಿಲ್ಲೆಗಳಲ್ಲಿ ನೀರಿನ ಅಭಾವ ಕಾಣಲಾರಂಬಿಸಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಲವೆಡೆ ಈಗಾಗಲೇ ಕುಡಿಯುವ ನೀರಿಗೂ ಅಭಾವ ಉಂಟಾಗಿದೆ.

ಈ ಮಧ್ಯೆ ರಾಜಧಾನಿ ಬೆಂಗಳೂರಿನಲ್ಲಿಯೂ ನೀರಿನ ಸಮಸ್ಯೆ ಹೆಚ್ಚಾಗಲಾರಂಭಿಸಿದೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಕಾವೇರಿ ನೀರಾವರಿ ತಾಂತ್ರಿಕ ಸಮಿತಿ ಆಘಾತಕಾರಿ ಸುದ್ದಿಯನ್ನು ಹೊರಹಾಕಿದೆ. ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳ ಈಗಿನ ನೀರಿನ ಮಟ್ಟದ ಪ್ರಕಾರ ಬೆಂಗಳೂರಿಗೆ ಇನ್ನು ಒಂದು ತಿಂಗಳು ಮಾತ್ರ ನೀರು ಪೂರೈಕೆ ಮಾಡಬಹುದು ಎಂದು ಸಮಿತಿ ಹೇಳಿದೆ.

ಬೆಂಗಳೂರಿಗೆ ಇನ್ನು ಒಂದು ತಿಂಗಳು ಮಾತ್ರ ನೀರು ಪೂರೈಕೆ.!
Comments (0)
Add Comment