ಬೆಂಗಳೂರು: ಸಂವಿಧಾನ ಬದಲಾವಣೆ ಮಾಡಿದ್ರೆ ದೇಶದಲ್ಲಿ ರಕ್ತಪಾತ ಆಗೋದು ಗ್ಯಾರಂಟಿ- ಸಿಎಂ

ಬೆಂಗಳೂರು: ಸಂವಿಧಾನ ಬದಲಾವಣೆ ಮಾಡೋದು ಬಿಜೆಪಿಯವರ ಹಿಡನ್ ಅಜೆಂಡಾ ಆಗಿದೆ. ಸಂಸದ ಅನಂತಕುಮಾರ ಮೂಲಕ‌ ಸಂವಿಧಾನ ಬದಲಾವಣೆಯ ಮಾತುಗಳನ್ನು ಬಿಜೆಪಿಯವರೇ ಹೇಳಿಸುತ್ತಿದ್ದಾರೆ. ಒಂದು ವೇಳೆ ನಮ್ಮ ಸಂವಿಧಾನವನ್ನು ಬದಲಾವಣೆ ಮಾಡಿದ್ದೇ ಆದರೆ ದೇಶದಲ್ಲಿ‌ ರಕ್ತಪಾತವಾಗೋದು ಗ್ಯಾರಂಟಿ! ಹೀಗಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಡಾ.ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಮನುವಾದ ತುರುಕಲು ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.

Comments (0)
Add Comment