ಬೆಂಗಳೂರು ಸೇರಿ 20ಕ್ಕೂ ಹೆಚ್ಚು ಕಡೆ ಐಟಿ ದಾಳಿ

ಬೆಂಗಳೂರು: ತೆರಿಗೆ ವಂಚನೆ ಆರೋಪದಡಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.

ಬೆಳ್ಳಂ ಬೆಳಗ್ಗೆ ಸುಮಾರು 20ಕ್ಕೂ ಅಧಿಕ ಕಡೆ ಐಟಿ ಅಧಿಕಾರಿಗಳ ತಂಡವು ಬಿಲ್ದರ್‌ಗಳು ಹಾಗೂ ಇತರೆ ಉದ್ಯಮಿಗಳ ಮನೆ-ಕಚೇರಿಗಳಿಗೆ ಏಕಕಾಲಕ್ಕೆ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕೆ.ಆರ್‌. ಪುರಂ ಸಮೀಪದ ಕೊಡಿಗೇಹಳ್ಳಿಯ ನಂಜುಂಡೇಶ್ವರ ಇನ್‌ಫ್ರಾಸ್ಟ್ರಕ್ಚರ್‌ ಪ್ರೈವೇಟ್‌ ಲಿಮಿಟೆಡ್‌ ಎಂಬ ಕಂಪೆನಿ ಮೇಲೂ ದಾಳಿ ಮಾಡಿರುವುದಾಗಿ ವರದಿಯಾಗಿದೆ.

Comments (0)
Add Comment