ಬೆಳ್ಳಂಬೆಳಿಗ್ಗೆ ಘೋರ ದುರಂತ – ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಕಾರು 6 ಜನರ ಜಲಸಮಾಧಿ

ಕಾನ್ಪುರ : ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಕಾರೊಂದು ನಾಲೆಗೆ ಬಿದ್ದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ತಲುಪಿ ಜೆಸಿಬಿ ಸಹಾಯದಿಂದ ಕಾರನ್ನು ಹೊರತೆಗೆದಿದ್ದಾರೆ. ಘಟನೆಯಲ್ಲಿ ಇಬ್ಬರು ಮಕ್ಕಳು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಸಿಕಂದ್ರ-ಶ್ರೀಗಂಧಪುರ ರಸ್ತೆಯ ಜಗನ್ನಾಥಪುರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಎಲ್ಲರೂ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಹೋಗಿದ್ದರು. ಈ ಜನರು ಇಟಾವಾದ ಫೂಕ್ ಗ್ರಾಮದಿಂದ ತಿಲಕ್ ಸಮಾರಂಭದಿಂದ ಹಿಂದಿರುಗುತ್ತಿದ್ದರು ಕಾರು ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಪರಿಣಾಮ ಸ್ಥಳದಲ್ಲೇ ಆರು ಜನರು ಸಾವನ್ನಪ್ಪಿದ್ದಾರೆ. ವಿಕಾಸ್, ಖುಷ್ಬು, ಗೋಲು, ಪ್ರತೀಕ್, ಸಂಜಯ್ ಮತ್ತು ಪ್ರಾಚಿ ಕಾರು ಚಾಲಕ ಮೃತಪಟ್ಟವರು. ಗಾಯಗೊಂಡವರನ್ನು ವೈಷ್ಣವಿ ಮತ್ತು ವಿರಾಟ್ ಎಂದು ಗುರುತಿಸಲಾಗಿದೆ.

Comments (0)
Add Comment