ಬೆಳ್ಳಂ ಬೆಳಗ್ಗೆ ರಾಜಸ್ಥಾನದಲ್ಲಿ ಭೀಕರ ಅಪಘಾತ : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 11 ಮಂದಿ ಸಾವು

ರಾಜಸ್ಥಾನ : ಬೆಳ್ಳಂ ಬೆಳಗ್ಗೆ ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಜವರಾಯ ಅಟ್ಟಹಾಸ ಮೆರೆದಿದ್ದು, ನಿಂತಿದ್ದ ಬಸ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 11 ಮಂದಿ ಸಾವನ್ನಪ್ಪಿದ್ದಾರೆ. 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಮಾಹಿತಿ ಪ್ರಕಾರ, ಪ್ರಯಾಣಿಕರನ್ನು ತುಂಬಿದ ಬಸ್ ಗುಜರಾತ್‌ನಿಂದ ಮಥುರಾ ಕಡೆಗೆ ಹೋಗುತ್ತಿತ್ತು. ಜೈಪುರ-ಆಗ್ರಾ ಹೆದ್ದಾರಿಯ ನಡಬೈ ಪೊಲೀಸ್ ಠಾಣೆ ವ್ಯಾಪ್ತಿಯ ಜೈಪುರ ಆಗ್ರಾ ರಾಷ್ಟ್ರೀಯ ಹೆದ್ದಾರಿಯ ಬಳಿ ಸೇತುವೆಯ ಮೇಲೆ ಬಸ್ ಕೆಟ್ಟುನಿಂತಿದೆ. ಅದರಿಂದ ಚಾಲಕ ಬಸ್ ನಿಲ್ಲಿಸಿ ಸರಿಪಡಿಸಲು ಮುಂದಾಗಿದ್ದ, ಆಗ ಹಿಂದಿನಿಂದ ಬಂದ ಲಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ.

Comments (0)
Add Comment