ಭತ್ತದ ಹುಲ್ಲು ತುಂಬಿದ್ದ ಟ್ರ್ಯಾಕ್ಟರ್‌ಗೆ ಮಾರುತಿ ಓಮಿನಿ ಡಿಕ್ಕಿ : ಒಂದೇ ಕುಟುಂಬದ ಮೂವರ ಸಾವು.!

 

 

ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗುಳ್ಳೇಹಳ್ಳಿ ಗ್ರಾಮದ ಬಳಿಯ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಭತ್ತದ ಹುಲ್ಲು ತುಂಬಿದ್ದ ಟ್ರ್ಯಾಕ್ಟರ್‌ಗೆ ಮಾರುತಿ ಓಮಿನಿ ವ್ಯಾನ್​ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಜರುಗಿದೆ.

ಚನ್ನಗಿರಿ ತಾಲ್ಲೂಕಿನ ನಾರಶೆಟ್ಟಿಹಳ್ಳಿ ಗ್ರಾಮದ ಒಂದೇ ಕುಟುಂಬದ ರುದ್ರೇಶಪ್ಪ (64), ಮಲ್ಲಿಕಾರ್ಜುನ್ (62) ಹಾಗೂ ಗಂಗಮ್ಮ (80) ಮೃತ ದುರ್ದೈವಿಗಳು. ರತ್ನಮ್ಮ ಅವರಿಗೆ ತೀವ್ರ ಗಾಯಗಳಾಗಿವೆ. ಇವರು ಎಲ್ಲರು ಸೇರಿ ವಾಹನದಲ್ಲಿ ಸಂತೇಬೆನ್ನೂರು ಕಡೆಯಿಂದ ಚನ್ನಗಿರಿ ಕಡೆಗೆ ಬರುತ್ತಿದ್ದರು ಎಂದು ತಿಳಿದುಬಂದಿದೆ.

ಭತ್ತದ ಹುಲ್ಲು ತುಂಬಿದ್ದ ಟ್ರ್ಯಾಕ್ಟರ್‌ಗೆ ಮಾರುತಿ ಓಮಿನಿ ಡಿಕ್ಕಿ : ಒಂದೇ ಕುಟುಂಬದ ಮೂವರ ಸಾವು.!
Comments (0)
Add Comment