ಭಾರತ್ ಜೋಡೋ ನ್ಯಾಯ ಯಾತ್ರೆಗೆ ಮಣಿಪುರಕ್ಕೆ ತೆರಳಿದ ಸಿದ್ದು, ಡಿಕೆಶಿ

ಬೆಂಗಳೂರು: ಭಾರತ್ ಜೋಡೋ ನ್ಯಾಯ ಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಣಿಪುರದ ಇಂಪಾಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪಕ್ಷದ ಮುಖಂಡರು ಸ್ವಾಗತ ಕೋರಿದರು.

ಇನ್ನು ಈ ವೇಳೆ ಸಚಿವರಾದ ಕೆ.ಜೆ. ಜಾರ್ಜ್, ಡಾ. ಜಿ. ಪರಮೇಶ್ವರ, ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

Comments (0)
Add Comment