ಮಂಡ್ಯ : ಹಾಡು ಹಗಲೇ ರೌಡಿಶೀಟರ್ ಬರ್ಬರ ಕೊಲೆ..!

ಮಂಡ್ಯ : ಹಾಡು ಹಗಲೇ ರೌಡಿಶೀಟರ್‌ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಹೋಬಳಿಯ ಪಾಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಪಾಲಹಳ್ಳಿ ಗ್ರಾಮದ ವಕೀಲ ನಾಗೇಂದ್ರ ಅವರ ಪುತ್ರ ಪ್ರಜ್ವಲ್ ಅಲಿಯಾಸ್ ಪಾಪು(29) ಕೊಲೆಯಾದ ರೌಡಿಶೀಟರ್.

ಪಾಲಹಳ್ಳಿ ಗ್ರಾಮದ ಬೇಕರಿ ಮುಂದೆ ಇಂದು ಬೆಳಿಗ್ಗೆ ನಿಂತಿದ್ದ ವೇಳೆ ಕೇರಳ ರಾಜ್ಯದ ನೋಂದಣಿ ಇರುವ ಬಿಳಿ ಇನೋವಾ ಕಾರಿನಲ್ಲಿ ಬಂದ ನಾಲ್ಕು ಜನ ಏಕಾಏಕಿ ಕಾರಿನಿಂದ ಇಳಿದು ಮಾರಕಾಸ್ತ್ರಗಳಿಂದ ಪ್ರಜ್ವಲ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಂತಕರಿಂದ ಪ್ರಜ್ವಲ್ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ತೀವ್ರ ರಕ್ತಸ್ರಾವದಿಂದ ಪ್ರಜ್ವಲ್ ಸ್ಥಳದಲ್ಲೇ ಸಾವನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಮಂಡ್ಯ ಎಸ್‌ಪಿ ಯತೀಶ್, ಎಎಸ್‌ಪಿ ತಿಮ್ಮಯ್ಯ, ಡಿವೈಎಸ್‌ಪಿ ಮುರುಳಿ, ಪಿಎಸ್‌ಐ ಪ್ರಕಾಶ್, ಎ ಮಲ್ಲೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಹಳೇ ದ್ವೇಷ ಕಾರಣ ಎಂದು ತಿಳಿದು ಬಂದಿದೆ.

Comments (0)
Add Comment