ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ – ನಾಲ್ಕು ಮಂದಿ ಮೃತ್ಯು

ಗುವಾಹತಿ: ಮಣಿಪುರದಲ್ಲಿ ಸೋಮವಾರ ಸಂಜೆ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು ನಾಲ್ಕು ಮಂದಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ನಾಲ್ಕು ಮಂದಿ ಸಾವನ್ನಪ್ಪಿದ್ದು, ಇತರ ಐದು ಮಂದಿಗೆ ಗಂಭೀರ ಸ್ವರೂಪದ ಗುಂಡೇಟು ತಗುಲಿದೆ ಎನ್ನಲಾಗಿದೆ.

ಇನ್ನು ಕಳೆದ ವರ್ಷದ ಮೇ ತಿಂಗಳಿನಿಂದ ಈವರೆಗೆ ಹಿಂಸಾಚಾರದಲ್ಲಿ 200ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿದೆ.

ತೌಬಲ್ ನ ಲಿಲಾಂಗ್ ಪ್ರದೇಶದಲ್ಲಿ ನಾಲ್ಕು ಮಂದಿ ಮೃತಪಟ್ಟಿರುವುದನ್ನು ಹಿರಿಯ ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ.

Comments (0)
Add Comment