ಮಹಾಪ್ರಭುವಿನ ಮುಖದಲ್ಲಿ ಆತಂಕ ಕಾಣುತ್ತಿದೆ – ಮೋದಿಗೆ ಪ್ರಕಾಶ್ ರಾಜ್ ಟಾಂಗ್

ಮೈಸೂರು: ‘ಮೋದಿ ಮುಖದಲ್ಲಿ ಆತಂಕ ಕಾಣುತ್ತಿದೆ. ನಾನು ಬಲಶಾಲಿ ಅಲ್ಲ, ಬಲಹೀನ ಆಗುತ್ತಿದ್ದೇನೆ ಎಂಬುದು ಅವರಿಗೆ ಗೊತ್ತಾಗುತ್ತಿದೆ. ಹೀಗಾಗಿ ಈ ಆತಂಕ ಕಾಣುತ್ತಿದೆ’ ಎಂದು ನಟ ಪ್ರಕಾಶ್ ರಾಜ್ ಕುಟುಕಿದ್ದಾರೆ. ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ಅಂಗವಾಗಿ ‘ಭಾರತ- ಸಂವಿಧಾನ-ಪ್ರಜಾಪ್ರಭುತ್ವದ ಉಳಿವಿಗಾಗಿ’ ಘೋಷವಾಕ್ಯದಡಿ ದಲಿತ ಸಂಘರ್ಷ ಸಮಿತಿಯಿಂದ ಮೈಸೂರಿನ ಎಂ.ಜಿ. ರಸ್ತೆಯ ತರಕಾರಿ ಮಾರುಕಟ್ಟೆಯಲ್ಲಿ ಭಾನುವಾರ ಆಯೋಜಿಸಿದ್ದ ಜನಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು. ಪ್ರಶ್ನೆ ಮಾಡುವವರನ್ನು ಜೈಲಿಗೆ ಕಳುಹಿಸುತ್ತಾರೆ. ಇ.ಡಿ ಅಧಿಕಾರಿಗಳಿಂದ ದಾಳಿ ಮಾಡ್ತಾರೆ. 400 ಸ್ಥಾನ ಗಳಿಸುತ್ತೇವೆ ಎನ್ನುತ್ತಾರೆ. ಇದನ್ನೆಲ್ಲ ನೋಡಿದ್ರೆ ಅವರು ಹೆದರಿದ್ದಾರೆ ಎನ್ನುವುದು ಗೊತ್ತಾಹುತ್ತೆ ಎಂದು ಪ್ರಕಾಶ್ ರಾಜ್ ವಾಗ್ದಾಳಿ ನಡೆಸಿದರು.

Comments (0)
Add Comment