ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ ನಿಧನ!

 

ದಾವಣಗೆರೆ; ಕರ್ನಾಟಕದ ಇಂದಿರಾ ಗಾಂಧಿ ಎಂದೇ ಖ್ಯಾತರಾಗಿದ್ದ ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ(90) ಇಂದು ದಾವಣಗೆರೆಯಲ್ಲಿ ನಿಧನರಾಗಿದ್ದಾರೆ.

ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನಾಳೆ ದಾವಣಗೆರೆಯ ಪಿ.ಬಿ.ರಸ್ತೆಯ ವೈಕುಂಠಧಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನಾಗಮ್ಮ ಅವರು 1972, 1978, 1989ರಲ್ಲಿ ಕಾಂಗ್ರೆಸ್‌ ಶಾಸಕಿಯಾಗಿ ಆಯ್ಕೆಯಾಗಿದ್ದರು. ಗುಂಡೂರಾವ್, ಬಂಗಾರಪ್ಪ, ಮೊಯ್ಲಿ ಸಂಪುಟದಲ್ಲಿ ಸಚಿವೆ ಆಗಿ ಸೇವೆ ಸಲ್ಲಿಸಿದ್ದಾರೆ.

Comments (0)
Add Comment