ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ಯೋಜನೆಗೆ ಅರ್ಜಿ ಆಹ್ವಾನ

 

ದಾವಣಗೆರೆ, : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, “ಶುಲ್ಕ ವಿನಾಯಿತಿ”, ಮತ್ತು “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವೆಬ್‍ಸೈಟ್  https://ssp.postmatric.karnataka.gov.in    ಅಥವಾ  https://bcwd.karnataka.gov.in      ಮೂಲಕ ಅರ್ಜಿಯನ್ನು 2024 ಜನವರಿ,10 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ: 8050770005. ಇಮೇಲ್ :  bcwdhelpline@gmail.com    ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್:  postmatrichelp@karnataka.gov.in     ನ್ನು ಸಂಪರ್ಕಿಸಬಹುದಾಗಿದೆ.

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿವಿದ್ಯಾಸಿರಿ ಯೋಜನೆಗೆ ಅರ್ಜಿ ಆಹ್ವಾನಶುಲ್ಕ ವಿನಾಯಿತಿ
Comments (0)
Add Comment