ಮೊದಲ ಕಂತು ಶಾಸಕರಿಗೆ ನಿಗಮ ಮಂಡಳಿ; ಕಾರ್ಯಕರ್ತರಿಗೆ.?

 

ಬೆಂಗಳೂರು: ಮೊದಲ ಹಂತದಲ್ಲಿ ಶಾಸಕರಿಗೆ ಮಾತ್ರ ನಿಗಮಮಂಡಳಿಗಳಿಗೆ ಅಧ್ಯಕ್ಷ ಸ್ಥಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿ, ಶಾಸಕರ ಬಳಿಕ, 2-3ನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಮತ್ತು ಡಿಸಿಎಂ ಡಿಕೆಶಿ ಜೊತೆ ಕಾಂಗ್ರೆಸ್ ರಾಜ್ಯಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಇಂದು ನಡೆಸಿದ 2ನೇ ಸುತ್ತಿನ ಸಭೆಯಲ್ಲಿ ಈ ಪಟ್ಟಿಯನ್ನು
ಅಂತಿಮಗೊಳಿಸಲಾಗಿದೆ.!

Comments (0)
Add Comment