ಮೋದಿ ಗ್ಯಾರಂಟಿ 24 ಕ್ಯಾರೆಟ್ ಚಿನ್ನದಂತೆ ಶುದ್ಧ-ರಾಜನಾಥ್ ಸಿಂಗ್

ನವದೆಹಲಿ: ಭಾರತೀಯ ಜನತಾ ಪಕ್ಷವು ತನ್ನ ಲೋಕಸಭಾ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಗೆ ‘ಸಂಕಲ್ಪ ಪತ್ರ’ ಎಂದು ಹೆಸರಿಸಲಾಗಿದೆ. ಇನ್ನು ಪ್ರಣಾಳಿಕೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ‘ಮೋದಿ ಗ್ಯಾರಂಟಿ 24 ಕ್ಯಾರೆಟ್ ಚಿನ್ನದಂತೆ ಶುದ್ಧವಾಗಿದೆ ಎಂದು ಬಣ್ಣಿಸಿದ್ದಾರೆ. ಬಿಜೆಪಿ ಪ್ರಣಾಳಿಕೆಯನ್ನು ವಿಶ್ವ ರಾಜಕೀಯದಲ್ಲಿ ಚಿನ್ನದ ಮಾನದಂಡವೆಂದು ನೋಡಲಾಗುತ್ತದೆ. ಮಹಿಳಾ ಮೀಸಲಾತಿ ಕಾಯ್ದೆ, 370ನೇ ವಿಧಿಯನ್ನು ರದ್ದುಪಡಿಸುವುದು ಮತ್ತು ರಾಮ ಮಂದಿರ ನಿರ್ಮಾಣದ ಹೊರತಾಗಿ ಕೇಂದ್ರ ಸರ್ಕಾರ ಕೈಗೊಂಡ ಹಲವಾರು ಅಭಿವೃದ್ಧಿ ಕ್ರಮಗಳನ್ನು ಉಲ್ಲೇಖಿಸಿ ಅವರು ನಮ್ಮ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿದರು.

Comments (0)
Add Comment