ರಾಂಚಿಯಲ್ಲಿ ಪ್ರಧಾನಿ ಮೋದಿ ಕಾರಿಗೆ ಅಡ್ಡ ಬಂದ ಮಹಿಳೆಯನ್ನು ವಶಕ್ಕೆ ಪಡೆದ ಪೊಲೀಸ್‌..!

ರಾಂಚಿ: ಪ್ರಧಾನಿ ನರೇಂದ್ರ ಮೋದಿ ಅವರು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮಸ್ಥಳ ಜಾರ್ಖಂಡ್‌ನ ಉಲಿಹಾತು ಗ್ರಾಮಕ್ಕೆ ಬುಧವಾರ ಭೇಟಿ ನೀಡಿದ್ದರು. ಜಯಂತಿ ಆಚರಿಸಿ ಮರಳುತ್ತಿದ್ದಾಗ ಪ್ರಧಾನಿ ಮೋದಿ ಭದ್ರತೆಯಲ್ಲಿ ಲೋಪವಾಗಿದೆ.

ಪ್ರಧಾನಿ ಮೋದಿ ಹಾಗೂ ಬೆಂಗಾವಲು ವಾಹನ ವೇಗವಾಗಿ ಸಾಗುತ್ತಿದ್ದಾಗ ರಸ್ತೆ ಬದಿಯಲ್ಲಿ ಮೋದಿಯನ್ನು ನೋಡಲು ನೂರಾರು ನಿಂತಿದ್ದರು. ಈ ಪೈಕಿ ಮಹಿಳೆಯೊಬ್ಬರು ಓಡುತ್ತಾ ನಡು ರಸ್ತೆ ಬಂದು ಮೋದಿಯ ಕಾರಿಗೆ ಅಡ್ಡಲಾಗಿ ನಿಂತಿದ್ದಾರೆ. ಈ ವೇಳೆ ದಿಢೀರ್ ವಾಹನಗಳ ಬ್ರೇಕ್ ಹಾಕಿ ನಿಲ್ಲಿಸಲಾಯಿತು. ಭದ್ರತಾ ಲೋಪದ ಜೊತೆಗೆ ಅಪಘಾತದ ಅಪಾಯವೂ ಎದುರಾಗಿತ್ತು. ತಕ್ಷಣವೇ ಭದ್ರತಾ ಪಡೆಗಳು ಮಧ್ಯಪ್ರವೇಶಿಸಿ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

Comments (0)
Add Comment