ರಾಜಸ್ಥಾನದಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಜೈಪುರ: ರಾಜಸ್ಥಾನದಲ್ಲಿ ನವೆಂಬರ್ 25 ರಂದು ಚುನಾವಣೆ ನಡೆಯಲಿದೆ. ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಎಲ್‌ಪಿಜಿ ಸಿಲಿಂಡರ್‌ಗೆ 450 ರೂ. ಸಬ್ಸಿಡಿ ಹಾಗೂ 2.5 ಲಕ್ಷ ಸರ್ಕಾರಿ ಉದ್ಯೋಗಗಳ ಭರವಸೆ ನೀಡಿದೆ.

‘ಸಂಕಲ್ಪ ಪತ್ರ’ ಅನಾವರಣ ಮಾಡಿದ ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಸರ್ಕಾರದ ಎಲ್ಲ ವಹಿವಾಟುಗಳನ್ನು ಬಹಿರಂಗ ಪಡಿಸುದರ ಜೊತೆಗೆ ಇತರ ಆರೋಪಗಳ ಹಗರಣಗಳ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗುವುದು ಎಂದು ಹೇಳಿದರು.

ಇನ್ನು ಹೆಣ್ಣುಮಕ್ಕಳು ಮತ್ತು ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ಘೋಷಿಸಿದ ಅವರು, ಪ್ರತಿ ಜಿಲ್ಲೆಯಲ್ಲಿ ‘ಮಹಿಳಾ ಠಾಣೆ’ ಮತ್ತು ಪ್ರತಿ ಪೊಲೀಸ್ ಠಾಣೆಯಲ್ಲಿ ‘ಮಹಿಳಾ ಡೆಸ್ಕ್’ ಮತ್ತು ಪ್ರತಿ ನಗರದಲ್ಲಿ ‘ಆ್ಯಂಟಿ ರೋಮಿಯೋ ಸ್ಕ್ವಾಡ್’ ಅನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.ಜೊತೆಗೆ ಹೆಣ್ಣುಮಗು ಜನಿಸಿದಾಗ 2 ಲಕ್ಷ ರೂ. ಉಳಿತಾಯ ಬಾಂಡ್ ಮತ್ತು ಭೂಮಿ ಹರಾಜಾದ ರೈತರಿಗೆ ಪರಿಹಾರ ನೀತಿ ಘೋಷಿಸಿದರು.

Comments (0)
Add Comment