ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಳ್ಳಂಬೆಳಿಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆಸಿದ್ದು, ಹಲವು ಸರಕಾರಿ ಅಧಿಕಾರಿಗಳ ಮನೆ , ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ವಿಜಯನಗರ ಜಿಲ್ಲೆಯ ಬೆಸ್ಕಾಂ ಅಧಿಕಾರಿಯಾಗಿರುವ ನಾಗರಾಜ್ ಮನೆ ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅಕ್ರಮವಾಗಿ ಸಂಪಾದಿಸಿದ ಹಣದಲ್ಲಿ ಪೆಟ್ರೋಲ್ ಬಂಕ್,ಮನೆ,ಜಮೀನು ಖರೀದಿಸಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಹೀಗಾಗಿ ಕೂಡ್ಲಿಗಿ ಪಟ್ಟಣ ಗುಡೆಕೋಟೆಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ. ಕೆಲ ದಿನಗಳ‌ ಹಿಂದೆ ನಾಗರಾಜ್ 7.50 ಲಕ್ಷ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದರು.

ಮಂಡ್ಯ ಮೂಲದ , ಬಿಬಿಎಂಪಿ ಅಧಿಕಾರಿ ಮಂಜೇಶ್ ಎಂಬವರ ಮಳವಳ್ಳಿ ತಾಲೂಕಿನ ಹಲಗೂರು ಹಾಗೂ ಗುಂಡಾಪುರ ಗ್ರಾಮದ ಮನೆಗಳ ಮೇಲೆ ಹಾಗೂ ಮಂಜೇಶ್ ಸಂಬಂಧಿ ಸುರೇಂದ್ರಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ನಡೆಸಿದೆ.ಮದ್ದೂರು ತಾಲೂಕಿನ ಎಸ್ ಐ ಕೋಡಿಹಳ್ಳಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಂಜೇಶ್ ಅಜ್ಜಿ ವಾಸಿಸುವ ಮದ್ದೂರು ತಾಲೂಕಿನ ಎಸ್.ಐ.ಕೋಡಿಹಳ್ಳಿಯಲ್ಲಿ‌ ಮನೆ ಮೇಲೂ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

Comments (0)
Add Comment