ರಾಜ್ಯಾದ್ಯಂತ ಭುಗಿಲೆದ್ದ ಕಾವೇರಿ ಕಿಚ್ಚು – ಆಕ್ರೋಶದ ಮಧ್ಯೆ ಕಬಿನಿ, ಕೆಆರ್‌ಎಸ್‌ದಿಂದ 5,000 ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡುಗಡೆ

ಕಾವೇರಿ ಕಿಚ್ಚು ದಿನೇ ದಿನೇ ಹೆಚ್ಚಾಗುತ್ತಿದೆ. ಮಂಡ್ಯ ಬೆಂಗಳೂರಿನಲ್ಲಿ ಅನ್ನದಾತರು ಕನ್ನಡಪರ ಸಂಘಟನೆಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ತೀವ್ರಗೊಂಡ ಪ್ರತಿಭಟನೆಯ ಮಧ್ಯೆ ಸುಪ್ರೀಂ ಕೋರ್ಟ್ ಆದೇಶದಂತೆ ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯದಿಂದ ತಮಿಳುನಾಡಿಗೆ 5,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ತಮಿಳುನಾಡು ಸರ್ಕಾರ ಸಲ್ಲಿಸಿದ್ದಂತ ಅರ್ಜಿಯಂತೆ ಪ್ರತಿ ದಿನ 5,000 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಕೆಆರ್‌ಎಸ್ ಜಲಾಶಯದಿಂದ ಸೀಪೇಸ್ ಹಾಗೂ ನಾಲೆಗೆ ಹರಿಸಿರುವ ನೀರಿನಲ್ಲೇ 3 ಸಾವಿರ ಕ್ಯೂಸೆಕ್ ನೀರು, ಉಳಿದ 2,000 ಕ್ಯೂಸೆಕ್ ನೀರನ್ನು ಕಬಿನಿಯಿಂದ ತಮಿಳುನಾಡಿಗೆ ಹರಿಸಲಾಗಿದೆ.

Comments (0)
Add Comment