ರಾಮಜನ್ಮಭೂಮಿ ಮತ ಪಡೆಯುವ ವಿಚಾರವಲ್ಲ, ಇದು ಸಾಂಸ್ಕೃತಿಕ ವಿಷಯವಾಗಿದೆ – ರಾಜನಾಥ್ ಸಿಂಗ್

ಡಿಸ್ಪುರ್: ರಾಮಜನ್ಮಭೂಮಿ ನಮಗೆ ಕೇವಲ ರಾಜಕೀಯ ವಿಚಾರವಲ್ಲ, ಇದು ನಮ್ಮ ಸಾಂಸ್ಕೃತಿಕ ವಿಷಯವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ 22 ರಂದು ಅಯೋಧ್ಯೆಯ ರಾಮಮಂದಿರದ ಉದ್ಘಾಟನಾ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಅಂದು ಉಪಸ್ಥಿತರಿರಲಿದ್ದಾರೆ ಎಂದರು.

ಇನ್ನು ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 16 ರಿಂದ ಏಳು ದಿನಗಳ ಕಾಲ ಕಾರ್ಯಕ್ರಮಗಳು ನಡೆಯಲಿದ್ದು, ಅಂತಿಮ ದಿನವಾದ ಜನವರಿ 22 ರಂದು ಬೆಳಗ್ಗಿನ ಪೂಜೆಯ ನಂತರ ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ ಎಂದಿದು ಹೇಳಿದ್ದಾರೆ.

Comments (0)
Add Comment