ರಾಷ್ಟ್ರಪತಿ ಅನುಮೋದನೆ: ಸಂಸತ್ತು ಪ್ರವೇಶಿಸಿದ ನಿರ್ಮಲಾ ಸೀತಾರಾಮನ್..!

ನವದೆಹಲಿ: ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ ನೀಡಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತು ಪ್ರವೇಶಿಸಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್‌ ಮಂಡಿಸಲಿರುವ 6ನೇ ಬಜೆಟ್ ಇದಾಗಿದೆ.

ಕೇಂದ್ರ ಹಣಕಾಸು ಸಚಿವಾಲಯದ ರಾಜ್ಯ ಸಚಿವ ಡಾ. ಭಗವತ್ ಕಿಶನ್ರಾವ್ ಕರಾಡ್ ಮತ್ತು ಪಂಕಜ್ ಚೌಧರಿ, ಕೇಂದ್ರ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್, ಬಜೆಟ್ ಗೆ ಅನುಮತಿ ಪಡೆದುಕೊಂಡಿದ್ದಾರೆ. ಇದೇ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಿಹಿ ತಿನ್ನಿಸಿ ಬೀಳ್ಕೊಟ್ಟರು

ಸದ್ಯ ನಿರ್ಮಲಾ ಸೀತಾರಾಮನ್ ನೇತೃತ್ವದ ಹಣಕಾಸು ಸಚಿವಾಲಯದ ತಂಡ ಸಂಸತ್ತು ಪ್ರವೇಶಿಸಿದ್ದು, ಬರೋಬ್ಬರಿ 11 ಗಂಟೆಗೆ ಬಜೆಟ್ ಮಂಡನೆಯಾಗಲಿದೆ.

Comments (0)
Add Comment