ಲಿಂಗಾಯತರು ಬಿಜೆಪಿ ಜೊತೆಗಿದ್ದಾರೆ.! ಜಾರಕಿಹೊಳಿ

 

ಬೆಳಗಾಂ: ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವುದರಿಂದ ಆ ಪಕ್ಷದಲ್ಲಿ ಹೆಚ್ಚಿನ ಬದಲಾವಣೆ ಆಗುವುದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಲಿಂಗಾಯತರು ಹಿಂದಿನಿಂದಲೂ ಬಿಜೆಪಿ ಜೊತೆಗೆ ಇದ್ದಾರೆ. ಕಾಂಗ್ರೆಸ್ ಜೊತೆಗೆ ಇರುವ ಲಿಂಗಾಯತರು ಯಾರು ಬಂದರೂ ಬಿಜೆಪಿಗೆ ಮತ ಹಾಕುವುದಿಲ್ಲ.

ಹೀಗಾಗಿ ವಿಜಯೇಂದ್ರ ಆಯ್ಕೆಯಾಗಿರುವುದು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಲಾಭ ತಂದುಕೊಡುತ್ತದೆ ಅನ್ನುವ ವಿಶ್ಲೇಷಣೆಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಅವರು ಹೇಳಿದರು.

ಸತೀಶ್ ಜಾರಕಿಹೊಳಿ
Comments (0)
Add Comment