ಲೋಕಸಭಾ ಚುನಾವಣೆ: ನಾಮಪತ್ರ ಸಲ್ಲಿಸಿದ ಎನ್​ಡಿಎ ಅಭ್ಯರ್ಥಿ ಡಾ.‌ಸಿ.ಎನ್ ಮಂಜುನಾಥ್

ಬೆಂಗಳೂರು: ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಈ ಹಿನ್ನೆಲೆ ಬೆಂಗಳೂರು ಗ್ರಾಮಾಂತರದಿಂದ ಎನ್​ಡಿಎ ಅಭ್ಯರ್ಥಿ ಡಾ.‌ಸಿ.ಎನ್ ಮಂಜುನಾಥ್ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ರಾಮನಗರ‌ದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಮನಸ್ಸು ಮತ್ತು ಹೃದಯಗಳು ಒಂದಾಗಿವೆ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಶಾಸಕ ಡಾ ಅಶ್ವಥ್ ನಾರಾಯಣ ಹಾಗೂ ಎಲ್ಲಾ 8 ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಗಿದೆ. ಎಲ್ಲ ಕಡೆ ಅತ್ಯುತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಇನ್ನು ಡಿಕೆ ಸಹೋದರರು ಮಾಡುವ ಕಾಮೆಂಟ್ ಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದ ಮಂಜುನಾಥ್ ಅದಕ್ಕೆಲ್ಲ ಮತದಾರರೇ ಉತ್ತರ ನೀಡುತ್ತಾರೆ ಎಂದರು.

Comments (0)
Add Comment